ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣವಾಗಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಮಹಿಳೆಯರು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯು ಕೆಲವೊಂದು ಮಹಿಳೆಯರಿಗೆ ದೊರೆಯದೆ ಇರುವುದರಿಂದ ಸರ್ಕಾರಕ್ಕೆ ಇದೊಂದು ಬಗೆಹರಿಯದ ಸಮಸ್ಯೆಯಾಗಿಯೇ ಉಳಿದಿದೆ.
ಸರ್ಕಾರವು ಗೃಹಲಕ್ಷ್ಮಿ ಯೋಜನೆಯಲ್ಲಿರುವಂತಹ ದೋಷಗಳನ್ನು ಸರಿಪಡಿಸಲು ಕೆಲವೊಂದು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಕೂಡ ಕೆಲವೊಂದು ಪ್ರಯೋಜನವಾಗಿವೆ, ಇನ್ನು ಕೆಲವು ಪ್ರಯೋಜನವಾಗಿರುವುದಿಲ್ಲ. ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಸುಮಾರು ಆರು ತಿಂಗಳು ಕಳೆದರೂ ಕೂಡ ಈ ಯೋಜನೆಯ ಸಂಪೂರ್ಣ ಪ್ರಯೋಜನ ಅರ್ಹರಿಗೆ ತಲುಪಿರುವುದಿಲ್ಲ.
6ನೇ ಕಂತಿನ ಬಿಡುಗಡೆಗೆ ಹೊಸ ನಿಯಮ :
ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳು 5ನೇ ಕಂತಿನ ಹಣವನ್ನು ಪಡೆದಿದ್ದಾರೆ. ಇವರಿಗೆ ಗೃಹಲಕ್ಷ್ಮಿ ಯೋಜನೆಯ ಹಣವು 10,000 ಗಳಾಗಿದ್ದು ಗೃಹಣಿಯರು ಒಟ್ಟಾಗಿ ಈ ಹಣವನ್ನು ಪಡೆದುಕೊಂಡಿದ್ದಾರೆ ಇನ್ನು ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಫೆಬ್ರವರಿ ಮೊದಲ ವಾರದಲ್ಲಿ ಬಿಡುಗಡೆ ಮಾಡುವುದಾಗಿ ಮಾಹಿತಿ ತಿಳಿದು ಬಂದಿದೆ. ಆದರೆ ಇದೀಗ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಮುನ್ನ ಸರ್ಕಾರವು ಹೊಸ ನಿಯಮವನ್ನು ಜಾರಿಗೊಳಿಸಿದೆ ಈ ನಿಯಮವನ್ನು ತಪ್ಪದೆ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಪಾಲಿಸಬೇಕಾಗಿದೆ.
ಇದನ್ನು ಓದಿ : ಬಡವರ್ಗದ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್ : 10 ಲಕ್ಷ ರೂಪಾಯಿ ಸಿಗಲಿದೆ
ಎನ್ಪಿಸಿಐ ಕಡ್ಡಾಯ :
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ಹೊಸ ನಿಯಮವನ್ನು ರಾಜ್ಯ ಸರ್ಕಾರ ರೂಪಿಸಿದ್ದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಎಂಪಿಸಿಐ ಕಡ್ಡಾಯಗೊಳಿಸಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕೆ ವೈ ಸಿ ಆದರ್ ಸೀಡಿಂಗ್ ಮಾಡಿಸುವುದರ ಜೊತೆಗೆ ಎನ್ಪಿಸಿಐಯನ್ನು ಕೂಡ ಕಡ್ಡಾಯವಾಗಿ ಮಾಡಿಸುವುದು ಅಗತ್ಯವಾಗಿದೆ.
ಒಟ್ಟಾರೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣವನ್ನು ಮಹಿಳೆಯರು ಪಡೆಯಬೇಕಾದರೆ ಎನ್ ಪಿ ಸಿ ಐ ಕಡ್ಡಾಯಗೊಳಿಸಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದರೆ ಅವರಿಗೆ ರಾಜ್ಯ ಸರ್ಕಾರದ ಈ ಹೊಸ ನಿಯಮದ ಬಗ್ಗೆ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.